ಮದ್ದೂರಿನಲ್ಲಿ ನಡೆದ ಗಲಭೆ ಪ್ರಕರಣ-21 ಜನರ ಬಂಧನ-ಗಲಭೆ ಹಿಂದೆ ಯಾರೇ ಇರಲಿ ಬಿಡಕ್ಕಿಲ್ಲ-ಸಿದ್ದರಾಮಯ್ಯ
ಗಲಭೆಯಲ್ಲಿ ನಿರತರಾಗಿದ್ದವರು ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು.ಬಿಜೆಪಿಯವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಬಗ್ಗೆ ಗಮನಕ್ಕೆ ಬಂದಿದೆ.
ಮದ್ದೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಲಾಗಿದೆ. ಯಾವುದೇ ಜಾತಿ – ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಖಚಿತ ಎಂದು ಸಿಎಂ ಸಿದ್ದರಾಮಯ್ಯ ಖಡಕ್ಕಾಗಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಮದ್ದೂರು ಗಲಭೆ ಹಿನ್ನಲೆಯಲ್ಲಿ ಈಗ ಬಿಜೆಪಿಯವರು ಪಾದಯಾತ್ರೆ ಕೈಗೊಂಡಿದ್ದನ್ನು ಖಂಡಿಸಿದರು. ಪರಿಸ್ಥಿತಿ ಮತ್ತಷ್ಟು ಹದಗೆಡುವಂತೆ ಮಾಡಿ, ಸಮಾಜದಲ್ಲಿ ಶಾಂತಿ ಕದಡುವುದೇ ಬಿಜೆಪಿಯ ಉದ್ದೇಶವಾಗಿದೆ ಎಂದು ಕಿಡಿಕಾರಿದರು.
ಮೈಸೂರಿನಲ್ಲಿ ಚಾಮುಂಡಿ ಬೆಟ್ಟ ಚಲೋ ಎಂಬ ಕಾರ್ಯಕ್ರಮ ಸೇರಿದಂತೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಚಾಮರಾಜನಗರದ ಆರ್ ಎಸ್ ಎಸ್ ಸಂಘಟನೆಯವರು ಇದರಲ್ಲಿ ಪಾಲ್ಗೊಂಡು, ಶಾಂತಿ ಕದಡುವ ಕೆಲಸವನ್ನು ಮಾಡುತ್ತಾರೆಂಬ ಕಾರಣಕ್ಕೆ ಪೊಲೀಸರು ಚಾಮುಂಡಿ ಬೆಟ್ಟ ಚಲೋಗೆ ಅನುಮತಿ ನೀಡಲಿಲ್ಲಎಂದರು.
ಗಲಭೆಯಲ್ಲಿ ನಿರತರಾಗಿದ್ದವರು ಯಾವುದೇ ಪಕ್ಷ, ಸಮುದಾಯವರೇ ಆಗಿದ್ದರೂ, ಕಾನೂನು ಕ್ರಮ ಕೈಗೊಳ್ಳಲಾಗುವುದು.ಬಿಜೆಪಿಯವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಕೇಂದ್ರ ಗೃಹ ಸಚಿವರಿಗೆ ದೂರು ನೀಡಿದ ಬಗ್ಗೆ ಗಮನಕ್ಕೆ ಬಂದಿದೆ.
ಕೇಂದ್ರದ ವಿರುದ್ಧ ನಡೆದ ರೈತ ಚಳವಳಿಯಲ್ಲಿ ಅನೇಕ ರೈತರು ಪ್ರಾಣ ಕಳೆದುಕೊಂಡರು. ಆಗ ಬಿಜೆಪಿಯವರು ಎಲ್ಲಿದ್ದರು? ಮಣಿಪುರದಲ್ಲಿ ನಡೆದ ಹಿಂಸಾಚಾರದ ಬಗ್ಗೆ ಬಿಜೆಪಿಯವರು ಧ್ವನಿ ಎತ್ತಲಿಲ್ಲವೇಕೆ? ಎಂದು ಪ್ರಶ್ನಿಸಿದರು. ಮಣಿಪುರದಲ್ಲಿ ಹಿಂಸಾಚಾರ ನಡೆದರೂ, ಪ್ರಧಾನಿಯವರು ಮಣಿಪುರಕ್ಕೆ ಭೇಟಿ ನೀಡಲೇ ಇಲ್ಲ ಎಂದು ಹೇಳಿದರು.


