
ಹುಬ್ಬಳ್ಳಿಯ ಶ್ರೀ ರಂಭಾಪುರಿ ಜಗದ್ಗುರು ವೀರ ಗಂಗಾಧರ ಸಮುದಾಯ ಭವನದ ಆವರಣದಲ್ಲಿ ಶ್ರೀ ವೀರಭದ್ರೇಶ್ವರ ಜಯಂತೋತ್ಸವ ಸಮಾರಂಭ ನಡೆಯಿತು.
ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಗ್ಗೆಯಿಂದಲೇ ಅಭಿಷೇಕ. ಪೂಜೆ ಪುನಸ್ಕಾರಗಳು ನೇರವೇರಿದವು.

ಇದೇ ವೇಳೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಧಾರವಾಡ ಜಿಲ್ಲಾ ಕಾಂಗ್ರೆಸ್ ಇಂಟಕ್ ಘಟಕದ ಅಧ್ಯಕ್ಷ ಬಂಗಾರೇಶ್ ಹಿರೇಮಠ ಅವರಿಗೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಆಶೀರ್ವದಿಸಿದರು.

ಧಾರವಾಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಚಂದ್ರಶೇಖರ್ ಜುಟ್ಟಲ್, ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಘಟಕದ ನೂತನ ಅಧ್ಯಕ್ಷ ಸದಾನಂದ್ ಡಂಗನವರ್ ಮತ್ತಿತರರು ಜಯಂತೋತ್ಸವದಲ್ಲಿ ಭಾಗವಹಿಸಿದ್ದರು.
ನ್ಯೂಸ್ ಡೆಸ್ಕ್
ನ್ಯೂಇಂಡಿಯಾ ಕನ್ನಡ
ಬೆಂಗಳೂರು







