DistrictKarnatakaShivamogga

ಶಿವಮೊಗ್ಗ: ನೀರಾನೆ ದಾಳಿಗೆ ಪಶು ವೈದ್ಯೆ ಬಲಿ| ಡಾ.ಸಮೀಕ್ಷಾ ರೆಡ್ಡಿ ಸಾವಿನ ಸುತ್ತ ಹಲವು ಅನುಮಾನ|ತನಿಖೆಗೆ ಸೂಚಿಸಿದ ಸಚಿವ ಈಶ್ವರ ಖಂಡ್ರೆ

ಕರ್ತ್ಯವ್ಯದಲ್ಲಿದ್ದ ಡಾ.ಸಮೀಕ್ಷಾ ರೆಡ್ಡಿ ಅವರು, ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋದ ಸಂದರ್ಭದಲ್ಲಿ ನೀರಾನೆ ಹಠಾತ್ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದಲ್ಲಿ ಟ್ರೇನಿ ವೈದ್ಯೆಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆ ನೀರಾನೆ ದಾಳಿಗೆ ಬಲಿಯಾಗಿದ್ದಾರೆ.

ಬೆಂಗಳೂರು ಮೂಲದ ಡಾ.ಸಮೀಕ್ಷಾ ರೆಡ್ಡಿ (27) ಮೃತ ಪಶುವೈದ್ಯೆ ಎಂದು ಗುರುತಿಸಲಾಗಿದೆ. ಡಾ.ಸಮೀಕ್ಷಾ ಅವರು ಸಫಾರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಫೆಬ್ರವರಿ1 ರಂದು ತರಬೇತಿ ಪಡೆಯಲು ನೇಮಕಗೊಂಡಿದ್ದರು ಎಂದು ತಿಳಿದುಬಂದಿದೆ.

ಇನ್ನು ಕೆಲವೇ ದಿನಗಳಲ್ಲಿ ಈಗ ದಾಳಿ ನಡೆಸಿರುವ ನೀರಾನೆ ತನ್ನ ಮಗುವಿಗೆ ಜನ್ಮ ನೀಡಬೇಕಿತ್ತು. ಆದರೆ ಗುರುವಾರ ರಾತ್ರಿ 11:45ರ ಸುಮಾರಿಗೆ ಅದರ ದೇಹಸ್ಥಿತಿ ಹದಗೆಟ್ಟಿರುವ ವಿಷಯ ತಿಳಿದಿದೆ.

ಸಾಂದರ್ಭಿಕ ಚಿತ್ರ

ಆ ಕೂಡಲೇ ಕರ್ತ್ಯವ್ಯದಲ್ಲಿದ್ದ ಡಾ.ಸಮೀಕ್ಷಾ ರೆಡ್ಡಿ ಅವರು, ನೀರಾನೆಯ ದೇಹದ ಉಷ್ಣತೆಯನ್ನು ಥರ್ಮಲ್ ಕ್ಯಾಮೆರಾ ಮೂಲಕ ಪರೀಕ್ಷಿಸಲು ಆವರಣದ ಒಳಗೆ ಹೋದ ಸಂದರ್ಭದಲ್ಲಿ ನೀರಾನೆ ಹಠಾತ್ ದಾಳಿ ನಡೆಸಿದೆ ಎಂದು ಹೇಳಲಾಗಿದೆ.

ನೀರಾನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಡಾ.ಸಮೀಕ್ಷಾ ರೆಡ್ಡಿ ಅವರನ್ನು ಆ ಕೂಡಲೇ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರದಂದು ಬೆಳಿಗ್ಗೆ 6:30ರ ಸುಮಾರಿಗೆ ಸಾವನ್ನಪ್ಪಿದ್ದಾರೆಂದು ಶಿವಮೊಗ್ಗ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಕ್ಷಿಯ ಚಿಕಿತ್ಸೆಗೆಂದು ಮೃಗಾಲಯಕ್ಕೆ ತೆರಳಿದ್ದ ವೈದ್ಯೆ ಸಮೀಕ್ಷಾ ರಾತ್ರಿ ವೇಳೆ ನೀರಾನೆ ಬಳಿ ತೆರಳಲು ಹಿರಿಯ ಪಶುವೈದ್ಯಾಧಿಕಾರಿಗಳು ಅನುಮತಿ ನೀಡಿದ್ದರಾ ಎಂಬುದು ಈವರೆಗೆ ಸ್ಪಷ್ಟವಾಗಿಲ್ಲ.

ಆಂತರಿಕ ತನಿಖೆ ನಡೆಯುತ್ತಿದೆ ಬಳಿಕ ಪೂರ್ತಿ ವಿಷಯ ಗೊತ್ತಾಗಲಿದೆ ಎಂದು ಹುಲಿ ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷ ತಿಳಿಸಿದ್ದಾರೆ.

ಮೃತ ವೈದ್ಯೆಯ ಕುಟುಂಬಕ್ಕೆ ನಿಯಮಾನುಸಾರ ತಕ್ಷಣವೇ ಪರಿಹಾರ ವಿತರಿಸುವಂತೆ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದು ದುರದೃಷ್ಟಕರ ಘಟನೆ. ಪ್ರತಿ ಜೀವವೂ ಅಮೂಲ್ಯ. ಸರ್ಕಾರವು ಮೃತ ವೈದ್ಯರ ಕುಟುಂಬದ ಪರವಾಗಿ ನಿಲ್ಲಲಿದೆ, ಎಂದು ಸಂತಾಪ ಸೂಚಿಸಿದ್ದಾರೆ.

ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭ ಪಾಲಿಸಬೇಕಾದ ಪ್ರಮಾಣಿತ ಕಾರ್ಯಚರಣೆ ವಿಧಾನವನ್ನು ಎಲ್ಲಾ ಮೃಗಾಲಯಗಳಲ್ಲಿ ಕಡ್ಡಾಯವಾಗಿ ಜಾರಿಗೊಳಿಸಲು ಸೂಚಿಸಿದ್ದಾರೆ.

Follow Us

Leave a Reply

Your email address will not be published. Required fields are marked *

Back to top button