CrimeDistrictMURDERSpecial Storiesಮಹದೇವ ಸಾಹುಕಾರ ಭೈರಗೊಂಡ

ಭೀಮಾ ತೀರದಲ್ಲಿ ಮತ್ತೆ ಗುಂಡಿನ ಮೊರೆತ- ಮಹಾದೇವ ಸಾಹುಕಾರ್‌ ಭೈರಗೊಂಡ ಶಿಷ್ಯನ ಮಡ೯ರ್‌

ಕ್ಷೌರಿಕನ ಅಂಗಡಿಯೊಳಗೆ ಕುರ್ಚಿಯ ಮೇಲೆ ಕುಳಿತಿದ್ದ ದಾಳಿಕೋರರು ಭೀಮನಗೌಡ ಬಿರಾದಾರ ಅವರ ಮೇಲೆ ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ. ಬಳಿಕ ತಲವಾರ್‌ನಿಂದ ಹಲ್ಲೆ ಮಾಡಿ ಸಿನಿಮಯ ರೀತಿಯಲ್ಲಿ ಪರಾರಿಯಾಗಿದ್ದಾರೆ.

ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮ ಪಂಚಾಯ್ತಿಅಧ್ಯಕ್ಷ, ಕಾಂಗ್ರೆಸ್‌ ಮುಖಂಡ ಭೀಮನಗೌಡ ಬಿರಾದಾರ ಅವರನ್ನು ಹಾಡಹಗಲೇ ದುಷ್ಕಮಿ೯ಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ನಡೆದಿದೆ.

ಇಂದು ಬೆಳಗ್ಗೆ ಎಂಟುವರೆ ಗಂಟೆ ಸುಮಾರಿಗೆ ಗ್ರಾಮ ಪಂಚಾಯಿತಿ ಕಚೇರಿಯ ಅನತಿ ದೂರದಲ್ಲಿಯೇ ಇರುವ ಕ್ಷೌರಿಕನ ಅಂಗಡಿಯಲ್ಲಿ ಈ ದುಷ್ಕ್ರತ್ಯ ನಡೆದಿದೆ.

ಹತ್ಯೆಯಾದ ಭೀಮನಗೌಡ ಬಿರಾದಾರ

ಹಳೆಯ ರಾಜಕೀಯ ವೈಷಮ್ಯದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು ಮೃತ ಬಿರಾದಾರನ ಚಿಕ್ಕಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ನೇರ ಎದೆಗೆ ಗುಂಡು ಹಾರಿಸಿ ಬಬ೯ರ ಹತ್ಯೆ ಮಾಡಲಾಗಿದೆ.

ಸದ್ಯ ಮೃತ ಬಿರಾದಾರ ಅವರ ದೇಹವನ್ನು ವಿಜಯಪುರ ಖಾಸಗಿ ಆಸ್ಪತ್ರೆಗೆ ತರಲಾಗಿದೆ. ಮರಣೋತ್ತರ ಪರೀಕ್ಷೆ ಮಾಡಲಾಗುತ್ತಿದೆ. ಪೋಲಿಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಕೊಲೆಗಾರರು ತಪ್ಪಿಸಿಕೊಳ್ಳದಂತೇ ಎಲ್ಲ ಕಡೆ ನಾಕಾಬಂದಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Vijayeendra Hungund

ನ್ಯೂ ಇಂಡಿಯಾ ಕನ್ನಡ" ಇದು ಸತ್ಯದ ಜಯ..ಎಂಬ ಧ್ಯೇಯದೊಂದಿಗೆ ಆರಂಭಿಸಲಾಗಿರುವ ಕನ್ನಡ ನ್ಯೂಸ್‌ ವೆಬ್‌ಸೈಟ್‌. ಸಂಜೆವಾಣಿ, ಹಾಯ್ ಬೆಂಗಳೂರು, ಲಂಕೇಶ್ ಪತ್ರಿಕೆ, ಟಿವಿ೯, ಕಸ್ತೂರಿ ನ್ಯೂಸ್, ಸುವರ್ಣ ನ್ಯೂಸ್ , ಜನಶ್ರೀ ನ್ಯೂಸ್ ಸಂಸ್ಥೆಗಳಲ್ಲಿ ಹಾಗೂ ದೂರದರ್ಶನ ಚಂದನ ಕನ್ನಡ ವಾಹಿನಿಯಲ್ಲಿ ಜಿಲ್ಲಾ ವರದಿಗಾರನಾಗಿ, ವಿಭಾಗೀಯ ಮುಖ್ಯಸ್ಥನಾಗಿ , ಇನ್ ಪುಟ್ ಹಾಗೂ ಔಟ್ ಪುಟ್ ಮುಖ್ಯಸ್ಥನಾಗಿ , ಮುಖ್ಯ ಉಪ ಸಂಪಾದಕನಾಗಿ ಹಾಗೂ ಸಹಾಯಕ ಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ನಿಷ್ಪಕ್ಷಪಾತ, ನಿರ್ಭಿಡೆಯಿಂದ ಸುದ್ದಿ ವಿಶ್ಲೇಷಣೆ ಮಾಡುವ ಉದ್ದೇಶದೊಂದಿಗೆ ಆರಂಭಿಸಿರುವ ಈ ನ್ಯೂಸ್‌ ಪೋಟ೯ಲಗೆ ತಮ್ಮ ಬೆಂಬಲವಿರಲಿ.. ವಿಜಯೀಂದ್ರ ಪಿ ಹುನಗುಂದ್‌ ಪ್ರಧಾನ ಸಂಪಾದಕರು, ನ್ಯೂ ಇಂಡಿಯಾ ಕನ್ನಡ, Email- editor@newindiakannada.com

Leave a Reply

Your email address will not be published. Required fields are marked *

Back to top button