ಛಲವಾದಿ ನಾರಾಯಣಸ್ವಾಮಿ,ಶಾಸಕ ಶ್ರೀವತ್ಸ ವಿರುದ್ಧ FIR ದಾಖಲು-ಸಕಾ೯ರದಿಂದ ಅಭಿವ್ಯಕ್ತಿ ಸ್ವಾತಂತ್ರ್ಯ ದಮನ-ಬಿ ವೈ ವಿಜಯೇಂದ್ರ
ಪೊಲೀಸರ ವಿವೇಚನಾ ರಹಿತ ಕ್ರಮ ಹಾಗೂ ವರ್ತನೆಗೆ ಬಿಜೆಪಿ ಕಾರ್ಯಕರ್ತರು ಜಗ್ಗುವ, ಕುಗ್ಗುವ ಪ್ರಶ್ನೆಯೇ ಇಲ್ಲ, ಇದನ್ನು ಸಮರ್ಥವಾಗಿ ಎದುರಿಸಿ ನಿಲ್ಲುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೀಂದ್ರ ಹೇಳಿದ್ದಾರೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಟಿ ಎಸ್ ಶ್ರೀವತ್ಸ ಅವರ ವಿರುದ್ಧ ಎಫ್ಐಆರ್ ದಾಖಲು ಮಾಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಧೋರಣೆಯ ದ್ಯೋತಕವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೀಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಫೇಸ್ಬುಕ್ ಪೇಜ್ನಲ್ಲಿ ಶನಿವಾರದಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವಿರೋಧ ಪಕ್ಷದ ನಾಯಕರನ್ನು ಅದರಲ್ಲೂ ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ರಾಜ್ಯ ಕಾಂಗ್ರೆಸ್ ಸರ್ಕಾರವು, ಪೊಲೀಸ್ ಅಸ್ತ್ರ ಬಳಸಿ ಬೆದರಿಕೆಯ ಮಾರ್ಗವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಎಫ್ಐಆರ್ ದಾಖಲಿಸಿ ಬಂಧನದ ಭೀತಿ ಸೃಷ್ಟಿಸುವುದು ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯಾಗಿದೆ ಎಂದು ಆರೋಪಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕತ್ತುಹಿಸುಕುವ ಕಾಂಗ್ರೆಸ್ ಸಂಸ್ಕೃತಿಯ ಮುಂದುವರಿದ ಭಾಗವಷ್ಟೆ ಎಂದು ವಿಜಯೀಂದ್ರ ಅಭಿಪ್ರಾಯಪಟ್ಟಿದ್ದಾರೆ.
ಮತೀಯ ಶಕ್ತಿಗಳು, ಸಮಾಜಘಾತಕ ಕಿಡಿಗೇಡಿಗಳು ಗಂಭೀರ ಅಪರಾಧದಲ್ಲಿ ತೊಡಗಿಸಿಕೊಂಡರೂ ಅವರನ್ನು ಬಂಧಿಸುವ, ಎಫ್ಐಆರ್ ದಾಖಲಿಸುವ ಕ್ರಮಕ್ಕೆ ಮುಂದಾಗದ ಪೊಲೀಸರು ಬಿಜೆಪಿ ಮುಖಂಡರ ಮೇಲೆ ದೂರು ಬಂದ ತಕ್ಷಣವೇ ಎಫ್ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷದವರ ಬಾಯಿ ಮುಚ್ಚಿಸಬಹುದು ಎಂದು ಅಂದುಕೊಂಡಂತಿದೆ. ಇಂತಹ ನಡೆಯನ್ನು ಬಿಜೆಪಿ ಅತ್ಯುಗ್ರವಾಗಿ ಖಂಡಿಸುತ್ತದೆ.

ಪೊಲೀಸರ ವಿವೇಚನಾ ರಹಿತ ಕ್ರಮ ಹಾಗೂ ವರ್ತನೆಗೆ ಬಿಜೆಪಿ ಕಾರ್ಯಕರ್ತರು ಜಗ್ಗುವ, ಕುಗ್ಗುವ ಪ್ರಶ್ನೆಯೇ ಇಲ್ಲ, ಇದನ್ನು ಸಮರ್ಥವಾಗಿ ಎದುರಿಸಿ ನಿಲ್ಲುತ್ತೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೀಂದ್ರ ಹೇಳಿದ್ದಾರೆ.
ಎಫ್ಐಆರ್ ದಾಖಲಿಸಿರುವ ಹಿಂದಿನ ಕತೆ
ಕುರುಬ ಜನಾಂಗದವರನ್ನು ಪರಿಶಿಷ್ಟ ಪಂಗಡಕ್ಕೆ ಸೇಪ೯ಡೆ ಮಾಡುವ ಕುರಿತಂತೇ ಹೇಳಿಕೆ ನೀಡಿದ್ದ ವಿಧಾನಪರಿಷತ್ ವಿರೋಧಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗು ಶಾಸಕ ಟಿ ಎಸ್ ಶ್ರೀವತ್ಸ್ ಅವರ ಮೇಲೆ ವಿಧಾನಸೌಧ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.

ಕನಾ೯ಟಕ ರಾಜ್ಯ ಕುರುಬರ ಎಸ್ ಟಿ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ನೀಡಿದ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆ 353(2), (ಎರಡು ಸಮುದಾಯಗಳ ಮೇಲೆ ದ್ವೇಷ ಬಿತ್ತುವ ಹೇಳಿಕೆ) ಅಡಿ ಎಫ್ಐಆರ್ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರನ್ನು ವಿರೋಧಿಸುವ ಭರದಲ್ಲಿ ಇಡೀ ಕುರುಬ ಜನಾಂಗಕ್ಕೆ ಅವಮಾನ ಮಾಡಿದ್ದಾರೆ ಎಂದು ಸಿದ್ದಣ್ಣ ತೇಜಿ ಅವರು ಶುಕ್ರವಾರ ಬೆಳಗ್ಗೆ ರಾಜ್ಯ ಪೋಲಿಸ್ ಮಹಾನಿದೇ೯ಶಕರಿಗೆ ದೂರು ನೀಡಿದ್ದರು. ಬಳೀಕ ಈ ದೂರನ್ನು ವಿಧಾನಸೌಧ ಠಾಣೆಗೆ ವಗಾ೯ಯಿಸಲಾಗಿತ್ತು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ


