ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯಕ್ಕೆ ಒತ್ತು-ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕು-ಎನ್ ಚೆಲುವರಾಯಸ್ವಾಮಿ
ರೋಗ ನಿರೋಧಕ ಶಕ್ತಿ ಹೆಚ್ಚಿಸುವ, ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ನೀಡುವ ಬೆಳೆಗಳನ್ನು ನೀಡುವ ತಳಿಗಳನ್ನು ನೀಡಲು ವಿಶ್ವವಿದ್ಯಾಲಯಗಳು ಶ್ರಮಿಸುತ್ತಿವೆ. ಲ್ಯಾಬ್ ಟು ಲ್ಯಾಂಡ್ ಎಂಬುದು ಸರ್ಕಾರದ ಪರಿಕಲ್ಪನೆಯಾಗಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.

ಕೃಷಿಯನ್ನು ಉದ್ದಿಮೆಯಾಗಿ ಪರಿವರ್ತಿಸಿ ರೈತರಿಗೆ ಉತ್ತಮ ಆದಾಯ ಪಡೆಯುವಂತಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಸೌಲಭ್ಯಗಳನ್ನು ಮತ್ತು ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಕರೆ ನೀಡಿದ್ದಾರೆ.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಶೀರ್ಷಿಕೆ ಅಡಿಯಲ್ಲಿ ಕೃಷಿ ಮಹಾವಿದ್ಯಾಲಯ ನವುಲೆ ಆವರಣದಲ್ಲಿ ಏರ್ಪಡಿಸಲಾಗಿರುವ ಕೃಷಿ ಮತ್ತು ತೋಟಗಾರಿಕೆ ಮೇಳ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಪೆಕ್ ಸಂಸ್ಥೆಯು ರಾಜ್ಯದಲ್ಲಿ 5 ಸಾವಿರ ಘಟಕಗಳಿಗೆ ಸಬ್ಸಿಡಿ ನೀಡಿದೆ ಎಂದ ಅವರು, ರೈತರಿಗೆ ಎಂಒ 4 ತಳಿಯನ್ನು ನೀಡಲು ಕೃಷಿ ಇಲಾಖೆ ಮತ್ತು ವಿಶ್ವವಿದ್ಯಾಲಯಗಳು ಬದ್ದವಾಗಿದೆ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.

ಕಡಿಮೆ ವೆಚ್ಚದಲ್ಲಿ ಉತ್ತಮ ಇಳುವರಿ ಮತ್ತು ಆದಾಯ ನೀಡುವ ಬೆಳೆಗಳನ್ನು ನೀಡುವ ಉದ್ದೇಶದಿಂದ ಇಂತಹ ಕೃಷಿ ಮೇಳಗಳನ್ನು ಆಯೋಜಿಸಲಾಗಿದ್ದು, ಇದನ್ನು ಬಳಸಿಕೊಂಡು ರೈತರು ಉದ್ಯಮಿಗಳಾಗಿ ಬಲವರ್ಧನೆಗೊಳ್ಳಬೇಕೆಂದು ಸಲಹೆ ನೀಡಿದರು.
ನಿರಂತರ ಮಳೆಗೂ ಹಾನಿಯಾಗದ ಭತ್ತದ ತಳಿ
ಭಾರತದಲ್ಲಿಯು ಇದರ ಸಂಶೋಧನೆ ನಡೆಯಲಿ
-ಎನ್ ಚೆಲುವರಾಯಸ್ವಾಮಿ
ಫಿಲಿಫೈನ್ಸ್ ದೇಶದಲ್ಲಿ ಸುಮಾರು 25 ರಿಂದ 30 ದಿನಗಳ ಕಾಲ ಮಳೆ ನಿರಂತರವಾಗಿ ಬಂದರೂ ಹಾನಿಯಾಗದಂತಹ ಭತ್ತದ ತಳಿಯನ್ನು ಕಂಡು ಹಿಡಿಯಲಾಗಿದೆ.
ಮುಂದಿನ ದಿನಗಳಲ್ಲಿ ನಮ್ಮ ವಿಜ್ಞಾನಿಗಳೂ ರೈತರಿಗೆ ಇಂತಹ ತಳಿಗಳನ್ನು ಸಂಶೋಧಿಸಿ ನೀಡುವರು ಎಂಬ ಭರವಸೆ ಇದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಎಂದು ಹೇಳಿದರು.

ರೋಗ ನಿರೋಧಕ ಶಕ್ತಿ ಹೆಚ್ಚಿಸುವ, ಕಡಿಮೆ ಖರ್ಚು ಮಾಡಿ ಹೆಚ್ಚು ಇಳುವರಿ ನೀಡುವ ಬೆಳೆಗಳನ್ನು ನೀಡುವ ತಳಿಗಳನ್ನು ನೀಡಲು ವಿಶ್ವವಿದ್ಯಾಲಯಗಳು ಶ್ರಮಿಸುತ್ತಿವೆ.
ಲ್ಯಾಬ್ ಟು ಲ್ಯಾಂಡ್ ಎಂಬುದು ಸರ್ಕಾರದ ಪರಿಕಲ್ಪನೆಯಾಗಿದೆ ಎಂದು ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.
ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ಗೊಬ್ಬರಕ್ಕೆ ಅಭಾವ ಉಂಟಾಗಿಲ್ಲ. ಸಾಕಷ್ಟು ಪೂರೈಕೆ ಮಾಡಲಾಗಿದೆ. ಕೇಂದ್ರದಿಂದ 3.5 ಲಕ್ಷ ಮೆಟ್ರಿಕ್ ಟನ್ ಗೊಬ್ಬರ ಸರಬರಾಜು ಕೊರತೆಯಾದರೂ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಕೃಷಿ ಹೊಂಡ ಯಾರು ಎಷ್ಟು ಬೇಕಾದರೂ ಮಾಡಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಗಾಲಯ ಬಲವರ್ಧನೆ ಮಾಡುವ ಕೆಲಸ ಆಗುತ್ತಿದೆ. ರೈತರು ಮಣ್ಣು ಪರೀಕ್ಷೆ ಮಾಡಿಸಿ ಎಂದ ಅವರು ಇಡೀ ರಾಜ್ಯದಲ್ಲಿ ಕೃಷಿಯಲ್ಲಿ ಡಿಜಿಟಲ್ ತಂತ್ರಜ್ಞಾನ ತರುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಆರ್.ಸಿ.ಜಗದೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 6 ಜಿಲ್ಲೆ ವಿದ್ಯಾರ್ಥಿಗಳು ಹಾಗೂ ರೈತರು ಬರಲಿದ್ದು, ರೈತರ ಅನುಕೂಲಕ್ಕಾಗಿ ಅನೇಕ ತಳಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

13 ತಾಂತ್ರಿಕ ತಳಿಗಳನ್ನು ಬಿಡುಗಡೆ 205 ಸಂಶೋಧನೆಗಳನ್ನು ನಡೆಸಲಾಗಿದ್ದು 90 ತಳಿಗಳಲ್ಲಿ 737 ಪ್ರಯೋಗ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣದ ಅವಕಾಶ ಮಾಡಿಕೊಡಲಾಗಿದ್ದು, ಪರೋಕ್ಷವಾಗಿ 4 ಲಕ್ಷ ರೈತರನ್ನು ತಲುಪುತ್ತಿದ್ದೇವೆ.
ಇರುವಕ್ಕಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದು ಇದಕ್ಕೆ ಅಗತ್ಯವಾದ ಪೀಠೋಪಕರಣಕ್ಕೆ ರೂ.10 ಕೋಟಿ ಅನುದಾನದ ಅವಶ್ಯಕತೆ ಎಂದು ಉಪಕುಲಪತಿ ಡಾ.ಆರ್.ಸಿ.ಜಗದೀಶ್ ಅವರು ಕೃಷಿ ಸಚಿವರ ಗಮನಕ್ಕೆ ತಂದರು.

ಇದೇ ವೇಳೆ ಉತ್ತಮ ರೈತ ಮತ್ತು ರೈತ ಮಹಿಳೆ ಪ್ರಶಸ್ತಿಯನ್ನು ವಿತರಣೆ ಮಾಡಿ ಗೌರವಿಸಲಾಯಿತು.
ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಶಾಸಕಿ ಶ್ರೀಮತಿ ಶಾರದಾ ಪೂರ್ಯಾನಾಯಕ್, ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಚೇತನ್ ಕೆ, ಕಾಡಾ ಅಧ್ಯಕ್ಷ ಡಾ.ಅಂಶುಮಂತ್, ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಎಸ್.ಆರ್ ಮಜುನಾಥ ಗೌಡ, ಡಾ.ಹನುಮಂತಪ್ಪ, ಆಡಳಿತ ಮಂಡಳಿ ಸದಸ್ಯರಾದ ಬಿ.ಕೆ ಕುಮಾರಸ್ವಾಮಿ, ಜೆ ಜೆ ಕಾವೇರಪ್ಪ, ದೇವಿಕುಮಾರ್, ಹಾಪ್ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ರಾಮಕೃಷ್ಣ ಆಶ್ರಮದ ವಿನಯಾನಂದ ಸರಸ್ವತಿ ಸ್ವಾಮೀಜಿ ಉಪಸ್ಥಿತರಿದ್ದರು.
ವಿವಿಧ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ವಿಶ್ವವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳು, ವಿಶ್ವವಿದ್ಯಾಲಯದ ಅಧಿಕಾರಿ ವರ್ಗದವರು, ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ರೈತರು ಭಾಗವಹಿಸಿದ್ದರು.
ವರದಿ: ಸೌಮ್ಯ ರೆಡ್ಡಿ
ಬ್ಯುರೋ ಚೀಫ್
ನ್ಯೂಇಂಡಿಯಾ ಕನ್ನಡ
ಶಿವಮೊಗ್ಗ


