ಮತಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ| ರಾಹುಲ್ ಗಾಂಧಿ ಹೋರಾಟಕ್ಕೆ ಮಣಿದ ಸರ್ಕಾರ|ಡಿ.9 ರಂದು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ
ಸಂಸತ್ತು ಭಾರತದ ಜನರಿಗೆ ಸೇರಿದ್ದು ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ಜನರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚೆ ಮಾಡೋಣ ಅಂದರೇ, ಅದರಿಂದ ಅವರು ನಿರಂತರವಾಗಿ ಪಲಾಯನಗೊಳ್ಳುತ್ತಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದರು.

ಒಂದೆಡೆ ವೋಟ್ ಚೋರಿ ಮತ್ತು ಇನ್ನೊಂದೆಡೆ ಮತಪಟ್ಟಿ ವಿಶೇಷ ಪರಿಷ್ಕರಣೆ ವಿರೋಧಿಸಿ, ರಾಷ್ಟ್ರಾದ್ಯಂತ ಅಭಿಯಾನ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮೊದಲ ಜಯ ಸಿಕ್ಕಿದೆ.
ಸಂಸತ್ತಿನ ಚಳಿಗಾಲದ ಅಧೀವೇಶನದಲ್ಲಿ ಮತಪಟ್ಟಿ ವಿಶೇಷ ಪರಿಷ್ಕರಣೆ (ಎಸ್ಐಆರ್) ಚರ್ಚೆಗೆ ಅವಕಾಶ ನೀಡದ ಪರಿಣಾಮ ವಿಪಕ್ಷಗಳ ಆಕ್ರೋಶಕ್ಕೆ ಮಣಿದಿರುವ ಕೇಂದ್ರ ಸರ್ಕಾರವು, ಡಿ9 ಮತ್ತು 10 ರಂದು ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಅವಕಾಶ ನೀಡುವದಾಗಿ ಪ್ರಕಟಿಸಿದೆ.

ಡಿಸೆಂಬರ್ 1 ರಿಂದ ಶುರು ಆಗಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಎರಡು ದಿನವು ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಅವಕಾಶ ನೀಡುವಂತೆ ವಿಪಕ್ಷಗಳು ಬಿಗಿಪಟ್ಟು ಹಿಡಿದಿದ್ದರಿಂದ ಕಲಾಪಗಳನ್ನು ಪದೇ ಪದೇ ಮುಂದೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿಪಕ್ಷಗಳ ಆಕ್ರೋಶವು ಜನಾಕ್ರೋಶವಾಗಿ ತಿರುಗುವ ಸಾಧ್ಯತೆ ಕಂಡು ಬಂದಿದ್ದರಿಂದ ಮಂಗಳವಾರದಂದು ತರಾತುರಿಯಲ್ಲಿ ಸರ್ವಪಕ್ಷ ಸಭೆ ಕರೆದ ಲೋಕಸಭಾಧ್ಯಕ್ಷ ಓಂ ಬಿರ್ಲಾ, ಕೇಂದ್ರ ಸರ್ಕಾರದ ಅಭಿಪ್ರಾಯ ಕೇಳಿದರು.
ಸಭೆಯಲ್ಲಿ ಭಾಗವಹಿಸಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಡಿಸೆಂಬರ್ 9 ರಂದು ಮಧ್ಯಾಹ್ನ 12 ಗಂಟೆಗೆ ಮತಪಟ್ಟಿ ವಿಶೇಷ ಪರಿಷ್ಕರಣೆಯ ಕುರಿತು ಚರ್ಚೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.
ಮತಪಟ್ಟಿ ವಿಶೇಷ ಪರಿಷ್ಕರಣೆಯನ್ನು ತಕ್ಷಣದಿಂದಲೇ ನಿಲ್ಲಿಸಲು ಆಗ್ರಹ
ಸಂಸತ್ ಆವರಣದಲ್ಲಿ ಇಂಡಿಯಾ ಒಕ್ಕೂಟದಿಂದ ಪ್ರತಿಭಟನೆ
ಸರ್ವಪಕ್ಷ ಸಭೆಗೂ ಮುನ್ನ ಮತಪಟ್ಟಿ ವಿಶೇಷ ಪರಿಷ್ಕರಣೆ ಚರ್ಚೆಗೆ ಆಗ್ರಹಿಸಿ ವಿಪಕ್ಷಗಳು ಸಂಸತ್ತಿನ ಒಳಗೆ ನಡೆಸುತ್ತಿದ್ದ ಪ್ರತಿಭಟನೆಯನ್ನು ಮಂಗಳವಾರದಂದು ಸಂಸತ್ ಆವರಣಕ್ಕೆ ಬಂದು ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಇಂಡಿಯಾ ಒಕ್ಕೂಟದ ಹಲವಾರು ನಾಯಕರು ಭಾಗವಹಿಸಿದ್ದರು.
ಮತಪಟ್ಟಿ ವಿಶೇಷ ಪರಿಷ್ಕರಣೆಯನ್ನು ನಿಲ್ಲಿಸುವಂತೆ ಆಗ್ರಹಿಸಿ, ಪೋಸ್ಟರ್ಗಳನ್ನು ಹಿಡಿದು ಘೋಷಣೆ ಕೂಗಿದರು.
ಸಂಸತ್ತಿನ ಅಧಿವೇಶನದಲ್ಲಿ ಸಾರ್ವಜನಿಕ ವಿಷಯಗಳ ಚರ್ಚೆಗೆ ಪ್ರಧಾನಿ ಮೋದಿ ಅವಕಾಶ ನೀಡುವದಿಲ್ಲ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

ಸಂಸತ್ತು ಭಾರತದ ಜನರಿಗೆ ಸೇರಿದ್ದು ಎಂದು ಪ್ರಧಾನಿ ಮೋದಿ ಹೇಳುತ್ತಾರೆ.
ಆದರೆ ಜನರ ಕಲ್ಯಾಣಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚೆ ಮಾಡೋಣ ಅಂದರೇ, ಅದರಿಂದ ಅವರು ನಿರಂತರವಾಗಿ ಪಲಾಯನಗೊಳ್ಳುತ್ತಾರೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದರು.
ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕುಗಳಿಗಿಂತ ದೊಡ್ಡ ಸಾರ್ವಜನಿಕ ಸಮಸ್ಯೆ ಏನಿರಬಹುದು? ಎಂದು ಪ್ರಧಾನಿ ಮೋದಿ ವಿರುದ್ದ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.
ಮತಪಟ್ಟಿ ವಿಶೇಷ ಪರಿಷ್ಕರಣೆಗೆ ವಿಷಯ ಚರ್ಚೆಗೆ ಖರ್ಗೆ ಪಟ್ಟು
ಎಸ್ಐಆರ್ ವಿಷಯವನ್ನು ನಿಯಮ 267ರಡಿಯಲ್ಲಿ ಕೈಗೆತ್ತಿಕೊಳ್ಳಲೇಬೇಕು. ಈ ನಿಯಮದಡಿ ನಿರ್ದಿಷ್ಟ ವಿಷಯವನ್ನು ಕೈಗೆತ್ತಿಕೊಳ್ಳಲೇಂದೆ ಈ ನಿಯಮವಿದೆ.
ಸರ್ಕಾರ ತನ್ನ ಮೊಂಡುತನದಿಂದ ನಿಯಮಗಳನ್ನು ಮೀರಿ ವರ್ತಿಸುತ್ತಿದೆ ಇದನ್ನು ನಾವು ಖಂಡಿಸುತ್ತೇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹೇಳಿದರು.
ಎಸ್ಐಆರ್ ಮೂಲಕ ಮತಕಳ್ಳತನ-ಪ್ರಿಯಾಂಕಾ ಗಾಂಧಿ ಆರೋಪ
ನರೇಂದ್ರ ಮೋದಿ ಸರ್ಕಾರ ಮತ್ತು ಚುನಾವಣಾ ಆಯೋಗ ಒಟ್ಟಾಗಿ ಎಸ್ಐಆರ್ ಮೂಲಕ “ಮತ ಕಳ್ಳತನ” ನಡೆಸುತ್ತಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗಂಭೀರ ಆರೋಪ ಮಾಡಿದರು.

ನಮ್ಮ ಲಕ್ಷಾಂತರ ದಲಿತ, ಹಿಂದುಳಿದ, ಬುಡಕಟ್ಟು ಮತ್ತು ವಂಚಿತ ಸಹೋದರ ಸಹೋದರಿಯರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಸಂಘಟಿತ ಪ್ರಯತ್ನವಾಗಿದೆ ಎಂದು ಪ್ರಿಯಾಂಕ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ಇಂಡಿಯಾ ಒಕ್ಕೂಟದ ಕೆ ಕನ್ಹಿಮೋಳಿ, ಟಿ ಆರ್ ಬಾಲು, ಜಾನ್ ಬ್ರಿಟ್ಟಾಸ್ ಸೇರಿದಂತೆ ಇತರ ವಿರೋಧ ಪಕ್ಷದ ನಾಯಕರು ಭಾಗವಹಿಸಿದ್ದರು.
ವೋಟ್ ಚೋರಿ ವಿರೋಧಿಸಿ ಅಭಿಯಾನ
ಎಸ್ಐಆರ್ ಕೈಬಿಡುವ ತನಕ ಹೋರಾಟ-
ಅನೀಲ್ಕುಮಾರ್ ಪಾಟೀಲ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರಿ ವಿರುದ್ದ ರಾಷ್ಟ್ರಾದ್ಯಂತ ನಡೆಸುತ್ತಿರುವ ಅಭಿಯಾನದ ಅಂಗವಾಗಿ ಸಹಿ ಸಂಗ್ರಹ ಸಹ ನಡೆಸಲಾಗಿತ್ತು.

ಆಯಾ ರಾಜ್ಯಗಳಿಂದ ಕೋಟ್ಯಾಂತರ ಸಂಖ್ಯೆಯಲ್ಲಿ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಹೈಕಮಾಂಡ ಸೂಚಿಸಿತ್ತು.
ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಹಾಗು ಡಿಸಿಎಂ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಹಿ ಸಂಗ್ರಹಣೆ ಭಾರಿ ಯಶಸ್ವಿಯಾಗಿತ್ತು.

ಈ ವೇಳೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ನೀಡಿದ್ದ ಟಾಸ್ಕ್ನಲ್ಲಿ ಒಂದುವರೆ ಲಕ್ಷಕ್ಕೂ ಅತಿ ಹೆಚ್ಚು ಸಹಿ ಸಂಗ್ರಹಣೆ ಮಾಡಿರುವ ಧಾರವಾಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗು ಮಾಜಿ ಮಹಾಪೌರ ಅನೀಲ್ಕುಮಾರ್ ಪಾಟೀಲ್ ಈಗಲೂ ಅದನ್ನು ಮುಂದುವರೆಸಿದ್ದಾರೆ.

ಜನರಲ್ಲಿ ವಿಶೇಷವಾಗಿ ಅಲ್ಪಸಂಖ್ಯಾತರಲ್ಲಿ ವೋಟ್ ಚೋರಿಯಿಂದ ಆಗುವ ಪರಿಣಾಮಗಳೇನು? ಎಂಬುದರ ಬಗ್ಗೆ ವಿಶೇಷ ಕಾರ್ಯಾಗಾರ ಹಾಗೂ ಸಭೆ ಮತ್ತು ಮನೆ ಮನೆಗೆ ತೆರಳಿ ಮಾಹಿತಿ ನೀಡುವ ಮೂಲಕ ಜಾಗೃತಿ ಉಂಟು ಮಾಡುತ್ತಿದ್ದಾರೆ.

ಅನೀಲ್ಕುಮಾರ್ ಪಾಟೀಲ್ ಅವರ ಈ ಸಾಧನೆಯನ್ನು ಖುದ್ದು ಗಮನಿಸಿರುವ ಕಾಂಗ್ರೆಸ್ ಹೈಕಮಾಂಡನ ಮಂಚೂಣಿ ನಾಯಕರು ಇನ್ನು ಹೆಚ್ಚಿನ ಜವಾಬ್ದಾರಿಯನ್ನು ಅವರಿಗೆ ನೀಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.
ವರದಿ: ವಿಜಯೀಂದ್ರ ಹುನಗುಂದ್
ಪ್ರಧಾನ ಸಂಪಾದಕರು
ನ್ಯೂಇಂಡಿಯಾ ಕನ್ನಡ
ಬೆಂಗಳೂರು.







